ಇದು ಟಾ_ರಸ ಹೇಳಿದ ಆಲ್_ಹಾಲ್ನ ಕತೆ. ಒಂದು ದಿನ ಮಧ್ಯಾಹ್ನ ಟಾ_ರಸ ಊಟ ಮುಗಿಸಿ ಆಶ್ರಮದ ಮರದ ನೆರಳಲ್ಲಿ ಕುಳಿತಿದ್ದಾಗ ಅಲ್ಲಿಗೆ ಗುರು ಆಲ್_ಹಾಲ್ನ ಆಗಮನವಾಯಿತು. ಇಬ್ಬರೂ ಮೌನ ಸಂಭಾಷಣೆಯಲ್ಲಿ ತೊಡಗಿದ್ದಾಗ ಆಗಂತುಕನೊಬ್ಬ ಬಂದ. ಆತ ಹತ್ತಿರ ಬಂದು ಪರಿಚಯಿಸಿಕೊಂಡು ಆಲ್_ಹಾಲ್ನಲ್ಲಿ ಕೇಳಿದ. `ತಾವು ಮಹಾಜ್ಞಾನಿಗಳೆಂದು ತಿಳಿದಿದ್ದೇನೆ. ನನಗೇನಾದರೂ ಉಪದೇಶ ನೀಡಬಹುದೇ?’
ಆಲ್_ಹಾಲ್ ಮೌನ ಮುರಿದು ಮಾತನಾಡತೊಡಗಿದ: `ನಿನ್ನ ಊಟವಾಯಿತೇ?’
`ಆಯಿತು ಮಹಾಸ್ವಾಮಿ’
`ಸರಿ ಹಾಗಾದರೆ ಹೋಗಿ ನಿನ್ನ ತಟ್ಟೆ ತೊಳೆದಿಡು’