ಟಾ_ರಸ ತಾಳೆ ಮರದ ಕೆಳಗೆ ಹೆಂಡದ ಬುರುಡೆಯೊಂದಿಗೆ ಧ್ಯಾನಕ್ಕೆ ಕುಳಿತ ಹೊತ್ತಿನಲ್ಲಿ ಅವನು ಭವಿಷ್ಯ ನುಡಿಯುತ್ತಾನೆ ಎಂಬ ನಂಬಿಕೆ ಅನೇಕರಿಗೆ ಇತ್ತು. ಧ್ಯಾನಸ್ಥ ಸ್ಥಿತಿಯಲ್ಲಿ ಟಾ_ರಸ ಹೇಳುತ್ತಿದ್ದ ಕೆಲವು ಮಾತುಗಳನ್ನು ಹಲವರು ಭವಿಷ್ಯದ ಸೂಚನೆಗಳಾಗಿ ಪರಿಗಣಿಸುತ್ತಿದ್ದರು. ಇದನ್ನು ಅರಿತವರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಟಾ_ರಸನನ್ನು ಧ್ಯಾನದ ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು.
ಹೀಗೆ ಬಂದ ಒಬ್ಬಾತ ತಾನೆಷ್ಟು ಶ್ರೀಮಂತ, ತಾನೆಷ್ಟು ತೀರ್ಥಕ್ಷೇತ್ರಗಳಿಗೆ ಶಾಂತಿ ಹುಡುಕಿಕೊಂಡು ಅಲೆದಿದ್ದೇನೆ ಎಂದೆಲ್ಲಾ ಹೇಳಿಕೊಂಡು `ಆದರೂ ನನಗೆ ಶಾಂತಿ ದೊರೆತಿಲ್ಲ. ಆದುದರಿಂದ ನಾನು ಹೇಗೆ ಬದುಕಬೇಕು. ನನ್ನ ಮುಂದಿನ ಬದುಕು ಹೇಗಿರುತ್ತದೆ?’ ಎಂದು ಪ್ರಶ್ನಿಸಿದ.
ಟಾ_ರಸ ಉತ್ತರವೂ ಮಿಂಚಿನ ವೇಗದಲ್ಲಿ ಬಂತು: `ನಿನ್ನ ಬದುಕು ಬಹಳ ಕಷ್ಟವಿದೆ. ಹಿಂದೆ ಯಾರೂ ನಿನ್ನ ಬದುಕನ್ನು ಬಾಳಿ ನೋಡಿರಲಿಲ್ಲ!’
ಧನ್ಯವಾದಗಳು
ಟಾ_ರಸರನ್ನು ಪರಿಚಯಿಸಿದ್ದಕ್ಕೆ .
ಸಂಪದದಲ್ಲಿ ಒಳ್ಳೆಯ ಝೆನ್ ಕಥೆಗಳನ್ನು ಪೋಸ್ಟ್ ಮಾದಿದ್ದೇನೆ (ಝೆನ್ ಕಥೆಗಳ ವಿಭಾಗದಲ್ಲಿ ನೋಡಿ).
ಶ್ರೀಕಾಂತ ಮಿಶ್ರಿಕೋಟಿ