Monthly Archives: January 2007

ತುಂಬಿದ ಬುರುಡೆ

ಗುರು ಆಲ್‌_ಹಾಲ್‌ರ ಬಳಿ ಉಪದೇಶ ಮತ್ತು ಶಿಷ್ಯತ್ವ ಯಾಚಿಸಿ ಬರುವವರ ಸಂಖ್ಯೆ ಬಹಳ ದೊಡ್ಡದಿತ್ತು. ಈ ಸಂಖ್ಯೆಯಿಂದ ಅವರೇನೂ ವಿಚಲಿತರಾಗಿರಲಿಲ್ಲ. ನಿಜವಾದ ವಿದ್ಯಾರ್ಥಿಯನ್ನು ಆರಿಸುವ ಕಲೆ ಅವರಿಗೆ ಗೊತ್ತಿತ್ತು. ಅವರ ಆಯ್ಕೆಯ ವಿಧಾನಕ್ಕೆ ಸಂಬಂಧಿಸಿದ ಒಂದು ಕತೆ ಇಲ್ಲಿದೆ.
ಒಮ್ಮೆ ದೂರ ದೇಶದಿಂದ ಒಬ್ಬ ವಿದ್ವಾಂಸ ಆಲ್‌_ಹಾಲ್‌ ಆಶ್ರಮಕ್ಕೆ ಬಂದ. ಆತನ ಉದ್ದೇಶ ಸರಳವಾಗಿತ್ತು. ಆಲ್‌_ಹಾಲ್‌ ಅವರ ಶಿಷ್ಯ ವೃತ್ತಿ ಮಾಡಿ `ಟೌತ್ವ’ ಗಳಿಸುವುದು. ಆಲ್‌_ಹಾಲ್‌ರ ಬಗ್ಗೆ ಮೊದಲೇ ಅಧ್ಯಯನ ನಡೆಸಿ ಪರೀಕ್ಷೆಗೆ ಸಿದ್ಧನಾಗಿದ್ದ.
ಆಲ್‌_ಹಾಲ್‌ ಈತನನ್ನು ಕರೆದು [...]

ನೆನಪಿಡುವ ಯಂತ್ರ

ಗುರು ಆಲ್‌_ಹಾಲ್‌ ಅವರ ಆಶ್ರಮಕ್ಕೆ ಪಶ್ಚಿಮದ ಸಾಧಕನೊಬ್ಬನ ಆಗಮನವಾಯಿತು. ಇವನು ಈವರೆಗೂ ಬಂದಿದ್ದ ಪಶ್ಚಿಮದ ಸಾಧಕರೆಲ್ಲರಿಗಿಂತ ಭಿನ್ನನಾಗಿದ್ದ. ತನ್ನ ಸಾಧನೆಗಳ ಬಗ್ಗೆ ಆತ ಏನನ್ನೂ ಹೇಳಲಿಲ್ಲ. ಬದಲಿಗೆ ಆ ಸಾಧನೆಗಳು ಅಷ್ಟೇನೂ ಮುಖ್ಯವಲ್ಲ. ಅದಕ್ಕಾಗಿಯೇ ನಾನು ಆಲ್‌_ಹಾಲ್‌ ಅವರ ಮಾರ್ಗದರ್ಶನದಲ್ಲಿ ಕಲಿಯಲು ಬಂದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದ.
ಬಂದ ದಿನ ಅವನಿಗೆ ಗುರುಗಳನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಮರು ದಿನ ಸಂಜೆಯ ಧ್ಯಾನದ ವೇಳೆ ಗುರುಗಳು ಅವನನ್ನು ಬರಲು ಹೇಳಿಕಳುಹಿಸಿದರು. ಆತ ಗುರುಗಳೆದುರು ನಿಂತು ತಾನು ವಿದ್ಯಾರ್ಥಿಯಾಗಿ ಬಂದಿದ್ದೇನೆ ಎಂದು ಪರಿಚಯಿಸಿಕೊಂಡ. [...]

ಬುದ್ಧಿವಂತನ ಪ್ರಶ್ನೆಗಳು

ಬಾಲಕ ಟಾ_ರಸನ ತುಂಟಾಟಗಳ ಕುರಿತು ಅನೇಕ ಕತೆಗಳಿವೆ. ಅದರಲ್ಲೊಂದು ಇಲ್ಲಿದೆ.
ಒಂದು ಮುಂಜಾನೆ ಮನೆಗೆ ತರಕಾರಿ ತರಲು ಟಾ_ರಸ ಮಾರುಕಟ್ಟೆಗೆ ಹೊರಟಿದ್ದ. ಎದುರಿನಿಂದ ಬಂದ `ಬುದ್ಧಿವಂತ’ ಹುಡುಗನೊಬ್ಬ `ಏನೋ  ಟಾ_ರಸ, ಎಲ್ಲಿಗೆ ಹೋಗುತ್ತಿದ್ದೀಯಾ’ ಎಂದು ಕೇಳಿದ. ಟಾ_ರಸ  ಇದಕ್ಕೆ `ನನ್ನ ಕಾಲು ಎಲ್ಲಿಗೆ ಕರೆದೊಯ್ಯುತ್ತದೋ ಅಲ್ಲಿಗೆ ಹೋಗುತ್ತಿದ್ದೇನೆ’ ಎಂದ.
`ಬುದ್ಧಿವಂತ’ನಿಗೆ ಏನು ಹೇಳಬೇಕೆಂದು ಅರ್ಥವಾಗದೆ ಸುಮ್ಮನಾದ. ಅಷ್ಟಕ್ಕೇ ಬಿಡದೆ ತುಂಬಾ ಯೋಚಿಸಿ ಮುಂದಿನ ಬಾರಿ ಸಿಕ್ಕಾಗ ಟಾ_ರಸ ಹೀಗೆಯೇ ಉತ್ತರಿಸಿದರೆ `ನಿನಗೆ ಕಾಲೇ ಇರಲಿಲ್ಲವಾದರೆ ಎಲ್ಲಿಗೆ ಹೋಗುತ್ತಿದ್ದೆ ?’ ಎಂದು [...]

ಹಗಲಿನಲ್ಲಿ ನಕ್ಷತ್ರ ಎಣಿಸುವ ವಿಧಾನ

ಟಾ_ರಸ ಚಿಕ್ಕವನಿರುವಾಗ ನಡೆದ ಘಟನೆ ಇದು. ಒಂದು ಅಮವಾಸ್ಯೆಯ ರಾತ್ರಿ ಟಾ_ರಸ ಅಂಗಳದಲ್ಲಿ ಅಂಗಾತ ಮಲಗಿ ಏನನ್ನೋ ಎಣಿಸುತ್ತಿದ್ದ. ಇದನ್ನು ಕಂಡ ಟಾ_ರಸ ತಾಯಿ `ಏನು ಮಾಡುತ್ತಿದ್ದೀಯಾ ಮಗು?’ ಎಂದು ಕೇಳಿದಳು. ಟಾ_ರಸ  ಉತ್ತರಿಸಿದ `ನಾನು ನಕ್ಷತ್ರಗಳನ್ನು ಎಣಿಸುತ್ತಿದ್ದೇನೆ’.
ಮಗನ ಉತ್ತರ ಕೇಳಿದ ತಾಯಿಗೆ ಭಾರತ ದೇಶದ ರಾಜನೊಬ್ಬ ತನ್ನ ವಿದೂಷಕನಲ್ಲಿ ನಕ್ಷತ್ರಗಳ ಸಂಖ್ಯೆ ಎಷ್ಟು ಕೇಳಿದಾಗ ಆತ ಒಂದು ಚೀಲದ ತುಂಬ ಮರಳನ್ನು ಕೊಂಡೊಯ್ದು ಕೊಟ್ಟು ಇಲ್ಲಿರುವ ಮರಳಿನ ಕಣದಷ್ಟು ನಕ್ಷತ್ರಗಳಿವೆ ಎಂದಿದ್ದ ಕತೆ ನೆನಪಾಯಿತು. ಇದನ್ನು [...]

ಸೊಳ್ಳೆ ಸಂಹಾರ ಕಥನವು

ಟಾ_ರಸ ಒಬ್ಬ ಕ್ರೂರಿ ದರೋಡೆಕೋರನಿಗೆ ಸಾಂತ್ವನ ನೀಡಿದ ವಿಷಯ ವಿವಿಧ ರೂಪ ಪಡೆದು ಜನಜನಿತವಾಗಿತ್ತು. ಇದನ್ನು ಕೇಳಿದ ಕೆಲವು ಹಳ್ಳಿಗರು ಒಂದು ದಿನ ಬಂದು ಟಾ_ರಸನನ್ನು ಭೇಟಿಯಾಗಿ ತಮ್ಮ ಊರಿನ ಮೇಲೆ ಆಗಾಗ ದಾಳಿ ಮಾಡುವ ದರೋಡೆಕೋರರ ತಂಡವೊಂದರ ಬಗ್ಗೆ ತಿಳಿಸಿ ಅವರ ಕಾಟದಿಂದ ತಪ್ಪಿಸಬೇಕು ಎಂದು ವಿನಂತಿಸಿದರು. ಟಾ_ರಸ ಇದಕ್ಕೆ ಒಪ್ಪಿ ಆ ಹಳ್ಳಿಗೆ ಹೋದ. ಎಂದಿನಂತೆ ರಾತ್ರಿ ಅಲ್ಲಿದ್ದ ತಾಳೆ ಮರವೊಂದರ ಕೆಳಗೆ ನೊರೆಯುಕ್ಕುವ ಹೆಂಡದ ಬುರುಡೆಯೆದುರು ಟಾ_ರಸ ಧ್ಯಾನ ಮಗ್ನನಾಗಿದ್ದಾಗ ದರೋಡೆಕೋರರು ಅವನನ್ನು [...]

ಗುರುವಿನ ಲಕ್ಷಣ

ಟಾ_ರಸ ಆಗಷ್ಟೇ ಬಂದು ಆಲ್‌_ಹಾಲ್‌ರ ಆಶ್ರಮಕ್ಕೆ ಸೇರಿದ್ದ. ಬಂದ ಕೆಲವೇ ದಿನಗಳಲ್ಲಿ ಆಶ್ರಮದ ಹಲವರಲ್ಲಿ ಪ್ರಶ್ನೆಗಳನ್ನು ಹುಟ್ಟಿಸಿದ್ದ ಟಾ_ರಸನನ್ನು ಕರೆದ ಗುರು ಆಲ್‌_ಹಾಲ್‌ ಅವನ ಕಿವಿಯಲ್ಲಿ `ವಿಮೋಚನಾ ಮಂತ್ರ’ ಬೋಧಿಸಿ `ಇದನ್ನು ನೀನು ಯಾರಿಗೂ ಹೇಳಬಾರದು. ಹೇಳಿದರೆ ನೀನು ಬಂಧನದಲ್ಲಿ ಸಿಲುಕಿ ನಿನ್ನಿಂದ ಕೇಳಿಸಿಕೊಂಡವರು ವಿಮೋಚಿತರಾಗುತ್ತಾರೆ’ ಎಂದು ಎಚ್ಚರಿಸಿ ಕಳುಹಿಸಿದರು.