Category Archives: ಟಾ_ರಸನ ಕಥೆಗಳು

ಹೆಣದ ಮೆರವಣಿಗೆ

ಟಾ_ರಸ ಪ್ರವಾಸದಲ್ಲಿದ್ದ. ಹಾದಿಯಲ್ಲಿ ಸಿಕ್ಕ ಊರಿನ ಕಟ್ಟೆಯೊಂದರ ಮೇಲೆ ಕುಳಿತು ತನ್ನ ಹೆಂಡದ ಬುರುಡೆಯನ್ನು ಎದುರಿಟ್ಟುಕೊಂಡು ಧ್ಯಾನಾಸಕ್ತನಾದ. ಊರಿಗೆ ಯಾರೋ ಯೋಗಿಗಳು ಬಂದಿದ್ದಾರೆ ಅಂದುಕೊಂಡ ಊರಿನ ಪ್ರಮುಖನೊಬ್ಬ ತಮ್ಮನ್ನು ಬಹುಕಾಲದಿಂದ ಕಾಡುತ್ತಿದ್ದ ಪ್ರಶ್ನೆಯೊಂದಕ್ಕೆ ಉತ್ತರ ಕಂಡುಕೊಳ್ಳಲು ತೀರ್ಮಾನಿಸಿದ.
ಟಾ_ರಸ ಕುಳಿತಿದ್ದ ಕಟ್ಟೆಯಲ್ಲಿಗೆ ಬಂದು ಎದುರು ಕುಳಿತರು. ಟಾ_ರಸ ಕಣ್ಣು ತೆರೆದು ಒಂದು ಗುಟುಕು ಹೆಂಡವನ್ನು ಗಂಟಲೊಳಕ್ಕಿಳಿಸಿ ಧ್ಯಾನ ಸಮಾಧಿಯೊಳಕ್ಕೆ ಇಳಿಯುವ ಮುನ್ನ ಎದುರು ಕುಳಿತಿದ್ದ ವ್ಯಕ್ತಿಯ ಮುಖ ನೋಡಿ ನಕ್ಕ.
ಇದನ್ನು ಕಂಡ ಊರ ಮುಖಂಡನಿಗೆ ಉತ್ಸಾಹ  ಬಂತು. ‘ಸ್ವಾಮೀ [...]

ನೀರಿನಲ್ಲಿ ನಡೆಯುವ ವಿದ್ಯೆ

ಟಾ_ರಸ  ಒಂದು ದಿನ ಆಲ್‌_ಹಾಲ್‌ರ ಆಶ್ರಮದ ಬದಿಯಲ್ಲಿ ಹರಿಯುತ್ತಿದ್ದ ನದಿಯ ಆಚೆ ದಡದಲ್ಲಿ ತನ್ನೊಬ್ಬ ಗೆಳೆಯನೊಂದಿಗೆ ಧ್ಯಾನಕ್ಕೆ ಕುಳಿತ. ನೊರೆಯುಕ್ಕುವ ಹೆಂಡದ ಬುರುಡೆಯೊಂದಿಗೆ ಕುಳಿತಿದ್ದಾಗ ಪಶ್ಚಿಮ ದೇಶದ ಸಾಧಕನೊಬ್ಬ ಆಲ್‌_ಹಾಲ್‌ರ ಆಶ್ರಮದ ದಾರಿ ಕೇಳಿಕೊಂಡು ಬಂದ. ನದಿಯಾಚೆ ಇದ್ದ ಆಶ್ರಮವನ್ನು ತೋರಿಸಿ ಈ ಗೆಳೆಯರು ಮತ್ತೆ ಧ್ಯಾನಮಗ್ನರಾದರು.
ನದಿಯ ಅಗಲ ನೋಡಿ ಆ ಸಾಧಕ ಅಲ್ಲೇ ಕುಳಿತ. ಈ ಹೊತ್ತಿಗೆ ಏನೋ ನೆನಪಾದವನಂತೆ ಮೇಲೆದ್ದ ಟಾ_ರಸನ ಗೆಳೆಯ ನೀರಿನ ಮೇಲೆ ನಡೆಯುತ್ತ ಆಶ್ರಮದವರೆಗೆ ಹೋಗಿ ಒಂದು ಬುರುಡೆ ಹೆಂಡ [...]

ನರಕವಾಸಿಯ ಭಯ

ಟಾ_ರಸ ಧ್ಯಾನಸ್ಥನಾದಾಗ ದೇವರ ಜತೆ ಸಂಭಾಷಿಸುತ್ತಿರುತ್ತಾನೆ ಎಂಬುದು ಜನಪ್ರಿಯ ನಂಬಿಕೆ. ಕೆಲವರು ಹೇಳುವಂತೆ ಅವನು ಸ್ವರ್ಗ-ನರಕಗಳ ದರ್ಶನವನ್ನೂ ಮಾಡಿಕೊಂಡು ಹಿಂದಿರುಗುತ್ತಿದ್ದನಂತೆ.

ಬುದ್ಧಿವಂತನ ಪ್ರಶ್ನೆಗಳು

ಬಾಲಕ ಟಾ_ರಸನ ತುಂಟಾಟಗಳ ಕುರಿತು ಅನೇಕ ಕತೆಗಳಿವೆ. ಅದರಲ್ಲೊಂದು ಇಲ್ಲಿದೆ.
ಒಂದು ಮುಂಜಾನೆ ಮನೆಗೆ ತರಕಾರಿ ತರಲು ಟಾ_ರಸ ಮಾರುಕಟ್ಟೆಗೆ ಹೊರಟಿದ್ದ. ಎದುರಿನಿಂದ ಬಂದ `ಬುದ್ಧಿವಂತ’ ಹುಡುಗನೊಬ್ಬ `ಏನೋ  ಟಾ_ರಸ, ಎಲ್ಲಿಗೆ ಹೋಗುತ್ತಿದ್ದೀಯಾ’ ಎಂದು ಕೇಳಿದ. ಟಾ_ರಸ  ಇದಕ್ಕೆ `ನನ್ನ ಕಾಲು ಎಲ್ಲಿಗೆ ಕರೆದೊಯ್ಯುತ್ತದೋ ಅಲ್ಲಿಗೆ ಹೋಗುತ್ತಿದ್ದೇನೆ’ ಎಂದ.
`ಬುದ್ಧಿವಂತ’ನಿಗೆ ಏನು ಹೇಳಬೇಕೆಂದು ಅರ್ಥವಾಗದೆ ಸುಮ್ಮನಾದ. ಅಷ್ಟಕ್ಕೇ ಬಿಡದೆ ತುಂಬಾ ಯೋಚಿಸಿ ಮುಂದಿನ ಬಾರಿ ಸಿಕ್ಕಾಗ ಟಾ_ರಸ ಹೀಗೆಯೇ ಉತ್ತರಿಸಿದರೆ `ನಿನಗೆ ಕಾಲೇ ಇರಲಿಲ್ಲವಾದರೆ ಎಲ್ಲಿಗೆ ಹೋಗುತ್ತಿದ್ದೆ ?’ ಎಂದು [...]

ಹಗಲಿನಲ್ಲಿ ನಕ್ಷತ್ರ ಎಣಿಸುವ ವಿಧಾನ

ಟಾ_ರಸ ಚಿಕ್ಕವನಿರುವಾಗ ನಡೆದ ಘಟನೆ ಇದು. ಒಂದು ಅಮವಾಸ್ಯೆಯ ರಾತ್ರಿ ಟಾ_ರಸ ಅಂಗಳದಲ್ಲಿ ಅಂಗಾತ ಮಲಗಿ ಏನನ್ನೋ ಎಣಿಸುತ್ತಿದ್ದ. ಇದನ್ನು ಕಂಡ ಟಾ_ರಸ ತಾಯಿ `ಏನು ಮಾಡುತ್ತಿದ್ದೀಯಾ ಮಗು?’ ಎಂದು ಕೇಳಿದಳು. ಟಾ_ರಸ  ಉತ್ತರಿಸಿದ `ನಾನು ನಕ್ಷತ್ರಗಳನ್ನು ಎಣಿಸುತ್ತಿದ್ದೇನೆ’.
ಮಗನ ಉತ್ತರ ಕೇಳಿದ ತಾಯಿಗೆ ಭಾರತ ದೇಶದ ರಾಜನೊಬ್ಬ ತನ್ನ ವಿದೂಷಕನಲ್ಲಿ ನಕ್ಷತ್ರಗಳ ಸಂಖ್ಯೆ ಎಷ್ಟು ಕೇಳಿದಾಗ ಆತ ಒಂದು ಚೀಲದ ತುಂಬ ಮರಳನ್ನು ಕೊಂಡೊಯ್ದು ಕೊಟ್ಟು ಇಲ್ಲಿರುವ ಮರಳಿನ ಕಣದಷ್ಟು ನಕ್ಷತ್ರಗಳಿವೆ ಎಂದಿದ್ದ ಕತೆ ನೆನಪಾಯಿತು. ಇದನ್ನು [...]

ಸೊಳ್ಳೆ ಸಂಹಾರ ಕಥನವು

ಟಾ_ರಸ ಒಬ್ಬ ಕ್ರೂರಿ ದರೋಡೆಕೋರನಿಗೆ ಸಾಂತ್ವನ ನೀಡಿದ ವಿಷಯ ವಿವಿಧ ರೂಪ ಪಡೆದು ಜನಜನಿತವಾಗಿತ್ತು. ಇದನ್ನು ಕೇಳಿದ ಕೆಲವು ಹಳ್ಳಿಗರು ಒಂದು ದಿನ ಬಂದು ಟಾ_ರಸನನ್ನು ಭೇಟಿಯಾಗಿ ತಮ್ಮ ಊರಿನ ಮೇಲೆ ಆಗಾಗ ದಾಳಿ ಮಾಡುವ ದರೋಡೆಕೋರರ ತಂಡವೊಂದರ ಬಗ್ಗೆ ತಿಳಿಸಿ ಅವರ ಕಾಟದಿಂದ ತಪ್ಪಿಸಬೇಕು ಎಂದು ವಿನಂತಿಸಿದರು. ಟಾ_ರಸ ಇದಕ್ಕೆ ಒಪ್ಪಿ ಆ ಹಳ್ಳಿಗೆ ಹೋದ. ಎಂದಿನಂತೆ ರಾತ್ರಿ ಅಲ್ಲಿದ್ದ ತಾಳೆ ಮರವೊಂದರ ಕೆಳಗೆ ನೊರೆಯುಕ್ಕುವ ಹೆಂಡದ ಬುರುಡೆಯೆದುರು ಟಾ_ರಸ ಧ್ಯಾನ ಮಗ್ನನಾಗಿದ್ದಾಗ ದರೋಡೆಕೋರರು ಅವನನ್ನು [...]

ಗುರುವಿನ ಲಕ್ಷಣ

ಟಾ_ರಸ ಆಗಷ್ಟೇ ಬಂದು ಆಲ್‌_ಹಾಲ್‌ರ ಆಶ್ರಮಕ್ಕೆ ಸೇರಿದ್ದ. ಬಂದ ಕೆಲವೇ ದಿನಗಳಲ್ಲಿ ಆಶ್ರಮದ ಹಲವರಲ್ಲಿ ಪ್ರಶ್ನೆಗಳನ್ನು ಹುಟ್ಟಿಸಿದ್ದ ಟಾ_ರಸನನ್ನು ಕರೆದ ಗುರು ಆಲ್‌_ಹಾಲ್‌ ಅವನ ಕಿವಿಯಲ್ಲಿ `ವಿಮೋಚನಾ ಮಂತ್ರ’ ಬೋಧಿಸಿ `ಇದನ್ನು ನೀನು ಯಾರಿಗೂ ಹೇಳಬಾರದು. ಹೇಳಿದರೆ ನೀನು ಬಂಧನದಲ್ಲಿ ಸಿಲುಕಿ ನಿನ್ನಿಂದ ಕೇಳಿಸಿಕೊಂಡವರು ವಿಮೋಚಿತರಾಗುತ್ತಾರೆ’ ಎಂದು ಎಚ್ಚರಿಸಿ ಕಳುಹಿಸಿದರು.

ಮೌನವಾಗಿರಬೇಕೆ?

ಟಾ_ರಸ ಶಿಷ್ಯರನ್ನು ಸ್ವೀಕರಿಸುವ ಪರಿಪಾಠವನ್ನು ರೂಢಿಸಿಕೊಂಡಿರಲಿಲ್ಲ. ಒಬ್ಬಾತ ಬಂದು ತನ್ನನ್ನು ಶಿಷ್ಯನನ್ನಾಗಿ ತೆಗೆದುಕೊಳ್ಳಲೇ ಬೇಕು ಎಂದು ಒತ್ತಾಯಿಸಿದ. ಇದಕ್ಕೆ ಒಪ್ಪಿದ ಟಾ_ರಸ `ನನ್ನ ಶಿಷ್ಯನಾಗಿರಬೇಕಾದರೆ ನಾನು ಹೇಳುವವರೆಗೂ ನೀನು ಮಾತನಾಡಬಾರದು’ ಎಂದ. ಆತ ಇದಕ್ಕೊಪ್ಪಿ ಟಾ_ರಸನ ಜತೆ ನಿಂತ.
ಐದು ವರ್ಷಗಳ ಕಾಲ ಆತನಿಗೆ ಮಾತನಾಡುವ ಅನುಮತಿ ದೊರೆಯಲಿಲ್ಲ. ಕೊನೆಗೊಮ್ಮೆ ಅನುಮತಿ ದೊರೆತಾಗ ಆತ ಹೇಳಿದ `ಭಿಕ್ಷೆ ಬೇಡುವುದು ಕಷ್ಟ’.
ಮತ್ತೆ ಐದು ವರ್ಷದ ಮೌನದ ಮತ್ತೊಮ್ಮೆ ಮಾತನಾಡಲು ಅನುಮತಿ ಸಿಕ್ಕಾಗ ಆತ `ಹೊದೆಯಲೊಂದು ಕಂಬಳಿ ಕೊಡಿಸಿ’ ಎಂದ.
ಮತ್ತೆ ಐದು [...]

ಬದುಕಿನ ಭವಿಷ್ಯ

ಟಾ_ರಸ ತಾಳೆ ಮರದ ಕೆಳಗೆ ಹೆಂಡದ ಬುರುಡೆಯೊಂದಿಗೆ ಧ್ಯಾನಕ್ಕೆ ಕುಳಿತ ಹೊತ್ತಿನಲ್ಲಿ ಅವನು ಭವಿಷ್ಯ ನುಡಿಯುತ್ತಾನೆ ಎಂಬ ನಂಬಿಕೆ ಅನೇಕರಿಗೆ ಇತ್ತು. ಧ್ಯಾನಸ್ಥ ಸ್ಥಿತಿಯಲ್ಲಿ ಟಾ_ರಸ ಹೇಳುತ್ತಿದ್ದ ಕೆಲವು ಮಾತುಗಳನ್ನು ಹಲವರು ಭವಿಷ್ಯದ ಸೂಚನೆಗಳಾಗಿ ಪರಿಗಣಿಸುತ್ತಿದ್ದರು. ಇದನ್ನು ಅರಿತವರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಟಾ_ರಸನನ್ನು ಧ್ಯಾನದ ಹೊತ್ತಿನಲ್ಲಿ ಭೇಟಿಯಾಗುತ್ತಿದ್ದರು.
ಹೀಗೆ ಬಂದ ಒಬ್ಬಾತ ತಾನೆಷ್ಟು ಶ್ರೀಮಂತ, ತಾನೆಷ್ಟು ತೀರ್ಥಕ್ಷೇತ್ರಗಳಿಗೆ ಶಾಂತಿ ಹುಡುಕಿಕೊಂಡು ಅಲೆದಿದ್ದೇನೆ ಎಂದೆಲ್ಲಾ ಹೇಳಿಕೊಂಡು `ಆದರೂ ನನಗೆ ಶಾಂತಿ ದೊರೆತಿಲ್ಲ. ಆದುದರಿಂದ ನಾನು ಹೇಗೆ ಬದುಕಬೇಕು. [...]

ಸ್ವರ್ಗ-ನರಕ

ಟಾ_ರಸ ಧ್ಯಾನಸ್ಥನಾದಾಗ ದೇವರ ಜತೆ ಸಂಭಾಷಿಸುತ್ತಿರುತ್ತಾನೆ ಎಂಬುದು ಜನಪ್ರಿಯ ನಂಬಿಕೆ. ಕೆಲವರು ಹೇಳುವಂತೆ ಅವನು ಸ್ವರ್ಗ-ನರಕಗಳ ದರ್ಶನವನ್ನೂ ಮಾಡಿಕೊಂಡು ಹಿಂದಿರುಗುತ್ತಿದ್ದನಂತೆ.  ಈ ಕಾರಣದಿಂದಾಗಿಯೇ ಧ್ಯಾನದಿಂದ ಎದ್ದ ತಕ್ಷಣ ಅವನಾಡುವ ಮಾತು ಈ ಲೋಕದ್ದಲ್ಲ ಎಂಬಂತೆ ಇರುತ್ತವೆ ಎಂದು ಕೆಲವರು ಹೇಳುತ್ತಾರೆ.
ಟಾ_ರಸ ಒಂದು ದಿನ ಎಂದಿನಂತೆ ಈಚಲ ಮರದ ಕೆಳಗೆ  ಕುಳಿತಿದ್ದಾಗ ಒಬ್ಬಾತ ಬಂದು ಸ್ವರ್ಗ-ನರಕಗಳ ಕುರಿತು ಮಾತನಾಡಲು ತೊಡಗಿದ. ಟಾ_ರಸ `ಒಂದು ನಿಮಿಷ’ ಎಂದು ಹೇಳಿ ಸಮಾಧಿಗೆ ತೆರಳಿದ.
ಒಂದೆರಡು ನಿಮಿಷಗಳ ನಂತರ ಕಣ್ಣು ತೆರೆದಾಗ ಎದುರಿದ್ದಾತ `ನರಕದ [...]