ಟಾ_ರಸ ಒಬ್ಬ ಕ್ರೂರಿ ದರೋಡೆಕೋರನಿಗೆ ಸಾಂತ್ವನ ನೀಡಿದ ವಿಷಯ ವಿವಿಧ ರೂಪ ಪಡೆದು ಜನಜನಿತವಾಗಿತ್ತು. ಇದನ್ನು ಕೇಳಿದ ಕೆಲವು ಹಳ್ಳಿಗರು ಒಂದು ದಿನ ಬಂದು ಟಾ_ರಸನನ್ನು ಭೇಟಿಯಾಗಿ ತಮ್ಮ ಊರಿನ ಮೇಲೆ ಆಗಾಗ ದಾಳಿ ಮಾಡುವ ದರೋಡೆಕೋರರ ತಂಡವೊಂದರ ಬಗ್ಗೆ ತಿಳಿಸಿ ಅವರ ಕಾಟದಿಂದ ತಪ್ಪಿಸಬೇಕು ಎಂದು ವಿನಂತಿಸಿದರು. ಟಾ_ರಸ ಇದಕ್ಕೆ ಒಪ್ಪಿ ಆ ಹಳ್ಳಿಗೆ ಹೋದ. ಎಂದಿನಂತೆ ರಾತ್ರಿ ಅಲ್ಲಿದ್ದ ತಾಳೆ ಮರವೊಂದರ ಕೆಳಗೆ ನೊರೆಯುಕ್ಕುವ ಹೆಂಡದ ಬುರುಡೆಯೆದುರು ಟಾ_ರಸ ಧ್ಯಾನ ಮಗ್ನನಾಗಿದ್ದಾಗ ದರೋಡೆಕೋರರು ಅವನನ್ನು ಸುತ್ತುವರಿದರು. ಇದರ ಅರಿವೇ ಇಲ್ಲದಂತೆ ಟಾ_ರಸ ತನ್ನ ಊರುಗೋಲೆತ್ತಿಕೊಂಡು ಒಮ್ಮೆ ಗಾಳಿಯಲ್ಲಿ ತಿರುಗಿಸಿದ. ಹತ್ತು ಸೊಳ್ಳೆಗಳು ಸತ್ತು ಟಾ_ರಸನ ಹೆಂಡದ ಬುರುಡೆಯೆದುರು ಬಿದ್ದವು. ದರೋಡೆಕೋರರು ಮತ್ತೆ ಆ ಹಳ್ಳಿಯ ತಂಟೆಗೆ ಬರಲಿಲ್ಲ.
-
ನಿಮಗಿದು ತಿಳಿದಿರಲಿ
ವಿಭಾಗಗಳು
ಹಳೆಯ ಕಥೆಗಳು
-
ಲೆಕ್ಕಿಗ
- 3,985 hits